ಬಿಲ್ಲವ ಬ್ರಿಗೇಡ್ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ

ಬಂಟ್ವಾಳ: ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ ಆರೋಪದ ಹಿನ್ನೆಲೆಯಲ್ಲಿ, ಬಿಲ್ಲವ ಬ್ರಿಗೇಡ್ ಬಂಟ್ವಾಳ ಸಂಘಟನೆಯು ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸಿದೆ.
ದೂರಿನ ಪ್ರಕಾರ, ಹರ್ಷ ಕೆ. ಶೆಟ್ಟಿ ಎಂಬಾತ ಯಾವುದೇ ಅಧಿಕೃತ ಮಾಹಿತಿ ಅಥವಾ ತನಿಖಾ ವರದಿಯ ಆಧಾರವಿಲ್ಲದೆ, ಪ್ರಕರಣದ ಆರೋಪಿಯನ್ನು ಬಿಲ್ಲವ ಸಮುದಾಯಕ್ಕೆ ಸೇರಿದವನು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರನ್ನು ದಿಕ್ಕು ತಪ್ಪಿಸುವ ಹಾಗೂ ಜಾತಿ ಸಂಘರ್ಷಕ್ಕೆ ಪ್ರಚೋದನೆ ನೀಡುವ ಪ್ರಯತ್ನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ರೀತಿಯ ಸುಳ್ಳು ಮತ್ತು ದ್ವೇಷಪೂರಿತ ಸಂದೇಶಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಲ್ಲವ ಬ್ರಿಗೇಡ್ ಬಂಟ್ವಾಳ ಮನವಿ ಮಾಡಿದೆ.
Relatedಸಂಬಂಧಿತ

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ
ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.
5h ago
ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ
ಆಕಾಶವಾಣಿ ಮಂಗಳೂರಿನಲ್ಲಿ ಪ್ರಸಾರ ನಿರ್ವಾಹಕರಾಗಿ (Transmission Executive) ಸೇವೆ ಸಲ್ಲಿಸುತ್ತಿದ್ದ ಶ್ರೀ ಲತೀಶ್ ಪಾಲ್ಧಾನೆ ಅವರು ಕಾರ್ಯಕ್ರಮ ನಿರ್ವಾಹಕರಾಗಿ (Programme Executive) ಪದೋನ್ನತಿ ಹೊಂದಿದ್ದಾರೆ.
5h ago
ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ...
8h ago
ಬಿ.ಸಿ.ರೋಡ್ನಲ್ಲಿ ಹತ್ಯೆಗೀಡಾದ ಯುವತಿ ಲಾವಣ್ಯ ಅವರ ಮನೆಗೆ ದ. ಕ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ಭೇಟಿ; ಕುಟುಂಬಕ್ಕೆ ಸಾಂತ್ವನ
ಬಿ.ಸಿ.ರೋಡ್ ಬಸ್ ನಿಲ್ದಾಣದ ಸಮೀಪ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಕಕ್ಯಪದವು ನಿವಾಸಿ ಲಾವಣ್ಯ ಅವರ ಮನೆಗೆ ಕಾಂಗ್ರೆಸ್ ಮುಖಂಡ ಪದ್ಮರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
1d ago