Skip to content
Billava News

ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷರಾಗಿ ದೀಪಕ್ ಎಸ್.ಪಿ. 2ನೇ ಬಾರಿಗೆ ಅವಿರೋಧ ಆಯ್ಕೆ

ದುಬೈ: ಯುಎಇಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆಯ 2026-2028ನೇ ಸಾಲಿನ ಪದಗ್ರಹಣ ಸಮಾರಂಭವು ಜುಲೈ 11, 2026ರಂದು ದುಬೈಯ ಪ್ರತಿಷ್ಠಿತ ಹೋಟೆಲೊಂದರಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷರಾಗಿ ದೀಪಕ್ ಎಸ್.ಪಿ. 2ನೇ ಬಾರಿಗೆ ಅವಿರೋಧ ಆಯ್ಕೆ

ದುಬೈ: ಯುಎಇಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆಯ 2026-2028ನೇ ಸಾಲಿನ ಪದಗ್ರಹಣ ಸಮಾರಂಭವು ಜುಲೈ 11, 2026ರಂದು ದುಬೈಯ ಪ್ರತಿಷ್ಠಿತ ಹೋಟೆಲೊಂದರಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

ಸಂಘದ ಅಧ್ಯಕ್ಷರಾಗಿ ಶ್ರೀ ದೀಪಕ್ ಎಸ್.ಪಿ. ಅವರು ಸತತ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸದಸ್ಯರು ಹಾಗೂ ಪದಾಧಿಕಾರಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವ ಸಲಹೆಗಾರರಾದ ಶ್ರೀ ಜಿತೇಂದ್ರ ಸುವರ್ಣ, ಶ್ರೀ ಮೋಹನ್ ಅತ್ತಾವರ, ಶ್ರೀ ಸತೀಶ್ ಪೂಜಾರಿ, ಶ್ರೀ ಮಾಧವ ಪೂಜಾರಿ, ಶ್ರೀ ಪ್ರಕಾಶ್ ಪೂಜಾರಿ, ಶ್ರೀ ಪ್ರಭಾಕರ ಸುವರ್ಣ ಹಾಗೂ ಶ್ರೀ ಕೃಷ್ಣ ಪೂಜಾರಿ ಅವರು ನೂತನ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಿ, ಸಂಘವು ಇನ್ನಷ್ಟು ಬೆಳೆಯಲಿ ಹಾಗೂ ಸಮಾಜ ಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಿ ಎಂದು ಶುಭ ಹಾರೈಸಿದರು.

94b0c0ff-aa47-4ede-9954-0381504e6481.jpeg

2026-2028ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಶ್ರೀ ದೀಪಕ್ ಎಸ್.ಪಿ., ಉಪಾಧ್ಯಕ್ಷರಾಗಿ ಪ್ರೇಮ್ ಕೋಟ್ಯಾನ್ ಮತ್ತು ಜಗನ್ನಾಥ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ರವಿ ಕೋಟ್ಯಾನ್, ಉಪ ಕಾರ್ಯದರ್ಶಿಯಾಗಿ ಯತಿರಾಜ್ ಕೋಟ್ಯಾನ್, ಖಜಾಂಚಿಯಾಗಿ ಪ್ರಭಾಕರ್ ಪೂಜಾರಿ ಹಾಗೂ ಲೆಕ್ಕ ಪರಿಶೋಧಕರಾಗಿ ಪ್ರಭಾಕರ್ ಸುವರ್ಣ ಕರ್ನಿರೆ ಆಯ್ಕೆಯಾದರು.

ಅದೇ ರೀತಿ ಕ್ರೀಡಾ, ಸಾಂಸ್ಕೃತಿಕ, ಮನೋರಂಜನೆ ಹಾಗೂ ಡಿಜಿಟಲ್ ತಂಡಗಳಿಗೆ ವಿವಿಧ ಸದಸ್ಯರನ್ನು ನೇಮಕಗೊಳಿಸಲಾಯಿತು. ಮಾಧ್ಯಮ ಸಲಹೆಗಾರರಾಗಿ ರಮೇಶ್ ಸುವರ್ಣ ಕಾರ್ಯನಿರ್ವಹಿಸಲಿದ್ದು, ಸಂಘದ ಹಿರಿಯರು ಗೌರವ ಸಲಹೆಗಾರರಾಗಿ ಮಾರ್ಗದರ್ಶನ ನೀಡಲಿದ್ದಾರೆ.

ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಎಸ್.ಪಿ. ಅವರು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ನೀಡಿದ ಅಮೂಲ್ಯ ಸಹಕಾರವನ್ನು ಸ್ಮರಿಸಿದರು. ಹಿರಿಯರಿಂದ ಕಿರಿಯರವರೆಗೆ ಎಲ್ಲರೂ ಸಂಘಟನೆಯ ಬೆನ್ನೆಲುಬಾಗಿ ನಿಂತು ಸಂಘದ ಬೆಳವಣಿಗೆಗೆ ಕೈಜೋಡಿಸಿದರೆ ಇನ್ನಷ್ಟು ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ಮುಂದಿನ ದಿನಗಳಲ್ಲಿಯೂ ಎಲ್ಲರ ಸಹಕಾರವನ್ನು ಕೋರಿದರು.

ಕಾರ್ಯದರ್ಶಿ ರವಿ ಕೋಟ್ಯಾನ್ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ರಿತೇಶ್ ಅಂಚನ್ ಕುಲಶೇಖರ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ನಿಕಟ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Found this useful? Share it.
Share

Relatedಸಂಬಂಧಿತ

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ
Billava News

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ

4h ago
ಕೋಟಿ-ಚೆನ್ನಯ್ಯ ಟ್ರೋಫಿ–ಸೀಸನ್ 2: ಸ್ನೇಹ, ಕ್ರೀಡಾಸ್ಫೂರ್ತಿ ಮತ್ತು ಸಂಘಟನಾ ಬಾಂಧವ್ಯದ ಸಂಗಮ, ಯುವವಾಹಿನಿ ಬೆಂಗಳೂರು ಘಟಕ
Billava News

ಕೋಟಿ-ಚೆನ್ನಯ್ಯ ಟ್ರೋಫಿ–ಸೀಸನ್ 2: ಸ್ನೇಹ, ಕ್ರೀಡಾಸ್ಫೂರ್ತಿ ಮತ್ತು ಸಂಘಟನಾ ಬಾಂಧವ್ಯದ ಸಂಗಮ, ಯುವವಾಹಿನಿ ಬೆಂಗಳೂರು ಘಟಕ

ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರಿಗಾಗಿ ಆಯೋಜಿಸಲಾದ "ಕೋಟಿ-ಚೆನ್ನಯ್ಯ ಟ್ರೋಫಿ – ಸೀಸನ್ 2" ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ (ಜು. 19) ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಉತ್ಸಾಹಭರಿತವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.

17h ago
ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ
Billava News

ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ

ಬಜ್ಪೆ: ರಾಷ್ಟ್ರದ ಆರ್ಥಿಕ ರಾಜಧಾನಿ ಮುಂಬೈನ ಹೆಸರಾಂತ ಉದ್ಯಮಿ, ಸಮಾಜ ಸಂಘಟಕ ಹಾಗೂ ಬಜ್ಪೆ ದೊಡ್ಡಿಕಟ್ಟ ಮನೆತನದ ಹೆಮ್ಮೆಯ ಪುತ್ರರಾದ ಶ್ರೀ ಎಲ್.ವಿ. ಅಮೀನ್ ಅವರ ಜೀವನ ಸಾಧನೆಯನ್ನು ಆಧರಿಸಿದ "ಲೋಕ ಸೇವಕ ಎಲ್.ವಿ. ಅಮೀನ್" ಗೌರವ ಗ್ರಂಥವನ್ನು ಮುಂಬೈ ...

2d ago
ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ
Billava News

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ

ಬಿಲ್ಲವವಾಣಿ ವತಿಯಿಂದ ಶ್ರೀ ಸಚಿನ್ ಪೂಜಾರಿ ಹೇರೂರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಅವರ ಮುಂದಿನ ಜೀವನ ಹಾಗೂ ನಾಯಕತ್ವದ ಪಯಣ ಉಜ್ವಲ...

2d ago