ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ...

ಮುಂಡ್ಲಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ ಸಂದರ್ಭದಲ್ಲಿ ಮುಂಡ್ಲಿಯ ಬಿಲ್ಲವ ಸಂಘಕ್ಕೆ ಭೇಟಿ ನೀಡಿದರು.

ಈ ವೇಳೆ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು, ಸಂಘದ ವಿವಿಧ ಸಾಮಾಜಿಕ ಹಾಗೂ ಸಂಘಟನಾ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ, ಸಂಘದ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಚರ್ಚಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಸಮಾಜದ ಅಭಿವೃದ್ಧಿಗೆ ಸಂಘಗಳು ವಹಿಸುತ್ತಿರುವ ಪಾತ್ರವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Relatedಸಂಬಂಧಿತ

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ
ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.
4h ago
ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ
ಆಕಾಶವಾಣಿ ಮಂಗಳೂರಿನಲ್ಲಿ ಪ್ರಸಾರ ನಿರ್ವಾಹಕರಾಗಿ (Transmission Executive) ಸೇವೆ ಸಲ್ಲಿಸುತ್ತಿದ್ದ ಶ್ರೀ ಲತೀಶ್ ಪಾಲ್ಧಾನೆ ಅವರು ಕಾರ್ಯಕ್ರಮ ನಿರ್ವಾಹಕರಾಗಿ (Programme Executive) ಪದೋನ್ನತಿ ಹೊಂದಿದ್ದಾರೆ.
5h ago
ಬಿಲ್ಲವ ಬ್ರಿಗೇಡ್ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ
14h ago
ಬಿ.ಸಿ.ರೋಡ್ನಲ್ಲಿ ಹತ್ಯೆಗೀಡಾದ ಯುವತಿ ಲಾವಣ್ಯ ಅವರ ಮನೆಗೆ ದ. ಕ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ಭೇಟಿ; ಕುಟುಂಬಕ್ಕೆ ಸಾಂತ್ವನ
ಬಿ.ಸಿ.ರೋಡ್ ಬಸ್ ನಿಲ್ದಾಣದ ಸಮೀಪ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಕಕ್ಯಪದವು ನಿವಾಸಿ ಲಾವಣ್ಯ ಅವರ ಮನೆಗೆ ಕಾಂಗ್ರೆಸ್ ಮುಖಂಡ ಪದ್ಮರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
1d ago