Skip to content
Billava News

ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ರಾಷ್ಟ್ರೀಯ ಸ್ಪರ್ಧೆಯಲ್ಲಿ ಉಡುಪಿಯ ಗ್ಯಾನ್ ಜಿ ಪಾಲನ್‌ಗೆ ಪ್ರಥಮ ರ‍್ಯಾಂಕ್

ಉಡುಪಿಯ ಪ್ರತಿಭಾವಂತ ವಿದ್ಯಾರ್ಥಿ ಗ್ಯಾನ್ ಜಿ ಪಾಲನ್ ಅವರು “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ರಾಷ್ಟ್ರೀಯ ಸ್ಪರ್ಧೆಯಲ್ಲಿ ಉಡುಪಿಯ ಗ್ಯಾನ್ ಜಿ ಪಾಲನ್‌ಗೆ ಪ್ರಥಮ ರ‍್ಯಾಂಕ್

ಉಡುಪಿ: ಉಡುಪಿಯ ಪ್ರತಿಭಾವಂತ ವಿದ್ಯಾರ್ಥಿ ಗ್ಯಾನ್ ಜಿ ಪಾಲನ್ ಅವರು “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

ಉಡುಪಿಯ ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಗ್ಯಾನ್ ಜಿ ಪಾಲನ್, ಭಾರತದಾದ್ಯಂತ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಪ್ರದರ್ಶಿಸಿದ್ದಾರೆ. ವಿವಿಧ ರಾಜ್ಯಗಳಿಂದ ಕೇವಲ 120 ವಿದ್ಯಾರ್ಥಿಗಳು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು, ಅವರಲ್ಲಿ ಕೊಡವೂರು ಬಾಚನಬೈಲು ನಿವಾಸಿಗಳಾದ ಗಣೇಶ್ ಹಾಗೂ ಅಂಬಾ ಜಿ ಪಾಲನ್ ದಂಪತಿಯ ಪುತ್ರ ಗ್ಯಾನ್ ಜಿ ಪಾಲನ್ ಅವರು ವ್ಯಾಲ್ಯೂ ಎಜುಕೇಶನ್ ವಿಭಾಗದಲ್ಲಿ ಮೊದಲ ರ‍್ಯಾಂಕ್ ಗಳಿಸಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಾಧನೆಗಾಗಿ ಬೆಂಗಳೂರಿನ ಶೇಷಾದ್ರಿಯಲ್ಲಿರುವ ಇಸ್ಕಾನ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಮಂಗಳಯಾನ ಯೋಜನೆಯ ರೂವಾರಿಗಳಲ್ಲಿ ಒಬ್ಬರು ಹಾಗೂ ಇಸ್ರೋದ ಮಾಜಿ ಅಧ್ಯಕ್ಷರಾದ S. Somanath ಅವರು ಗ್ಯಾನ್ ಜಿ ಪಾಲನ್ ಅವರಿಗೆ ಪ್ರಶಸ್ತಿ ಪತ್ರ, ಸೈಕಲ್ ಹಾಗೂ ಇಸ್ರೋ ಭೇಟಿ ನೀಡುವ ವಿಶೇಷ ಅವಕಾಶವನ್ನು ನೀಡಿ ಸನ್ಮಾನಿಸಿದರು.

ಗ್ಯಾನ್ ಜಿ ಪಾಲನ್ ಅವರ ಈ ಅಪೂರ್ವ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಬಂಧು-ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Found this useful? Share it.
Share

Relatedಸಂಬಂಧಿತ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ
Billava News

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ)ಯ ಮುಂಬೈ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು...

27m ago
ಉತ್ಸಾಹ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಧನೆಯ ಶಿಖರಕ್ಕೇರಿದ ಯುಥಿಕಾ ಪೂಜಾರಿ
Billava News

ಉತ್ಸಾಹ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಧನೆಯ ಶಿಖರಕ್ಕೇರಿದ ಯುಥಿಕಾ ಪೂಜಾರಿ

ಚಿತ್ರಕಲೆಗೆ ಅಪಾರ ಆಸಕ್ತಿ ಹೊಂದಿರುವ ಸ್ವಯಂ-ಕಲಿತ ಕಲಾವಿದೆ ಯುಥಿಕಾ ಪೂಜಾರಿ ಅವರು ಸಮರ್ಪಣೆ, ಕಠಿಣ ಪರಿಶ್ರಮ...

35m ago
ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ
Billava News

ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ

ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ...

40m ago
ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ನಾಮಕರಣಕ್ಕೆ ಯುವವಾಹಿನಿ (ರಿ.) ಉಪ್ಪಿನಂಗಡಿ ಮನವಿ
Billava News

ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ನಾಮಕರಣಕ್ಕೆ ಯುವವಾಹಿನಿ (ರಿ.) ಉಪ್ಪಿನಂಗಡಿ ಮನವಿ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ...

1h ago