Skip to content
Billava News

ಬಿರುವೆರ್ ಕುಡ್ಲ ದುಬಾಯಿ ಘಟಕದಿಂದ ₹1.65 ಲಕ್ಷ ನೆರವು ವಿತರಣೆ

ಸಮಾಜಸೇವೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿರುವ ಬಿರುವೆರ್ ಕುಡ್ಲ ಸಂಘಟನೆಯ ದುಬಾಯಿ ಘಟಕದ ಆಶ್ರಯದಲ್ಲಿ ಎರಡು ಅಸಹಾಯಕ ಕುಟುಂಬಗಳಿಗೆ ಒಟ್ಟು ₹1.65 ಲಕ್ಷ ಆರ್ಥಿಕ ನೆರವು ವಿತರಿಸಲಾಯಿತು.

ಬಿರುವೆರ್ ಕುಡ್ಲ ದುಬಾಯಿ ಘಟಕದಿಂದ ₹1.65 ಲಕ್ಷ ನೆರವು ವಿತರಣೆ

ಮಂಗಳೂರು, ಜು. 16: ಸಮಾಜಸೇವೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿರುವ ಬಿರುವೆರ್ ಕುಡ್ಲ ಸಂಘಟನೆಯ ದುಬಾಯಿ ಘಟಕದ ಆಶ್ರಯದಲ್ಲಿ ಎರಡು ಅಸಹಾಯಕ ಕುಟುಂಬಗಳಿಗೆ ಒಟ್ಟು ₹1.65 ಲಕ್ಷ ಆರ್ಥಿಕ ನೆರವು ವಿತರಿಸಲಾಯಿತು.

fbb350d1-47ad-4cf9-87cb-81f3c8738424.jpeg

ಅನಾರೋಗ್ಯದಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ₹55,000 ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ದುರ್ಗಾಪ್ರಸಾದ್ ಅವರ ಚಿಕಿತ್ಸೆಗೆ ₹1.10 ಲಕ್ಷ ನೆರವನ್ನು ಸಂಘಟನೆಯ ಪದಾಧಿಕಾರಿಗಳು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಬಿರುವೆರ್ ಕುಡ್ಲ ಸಂಘಟನೆಯು ಹಲವು ವರ್ಷಗಳಿಂದ ಜಾತಿ, ಧರ್ಮ, ಭೇದವಿಲ್ಲದೆ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದು, ವಿದೇಶದಲ್ಲಿ ದುಡಿಯುತ್ತಿರುವ ಕನ್ನಡಿಗರು ತಮ್ಮ ಊರಿನ ಜನರ ನೆರವಿಗೆ ಧಾವಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಹಾಗೂ ತಂಡದವರು ನಡೆಸುತ್ತಿರುವ ಸೇವಾ ಕಾರ್ಯಗಳು ಮುಂದೆಯೂ ನಿರಂತರವಾಗಿ ಸಾಗಲಿ ಎಂದು ಹಾರೈಸಿದರು. ಯುವಕರ ಸಮಾಜಮುಖಿ ಕಾರ್ಯಗಳಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಬಿರುವೆರ್ ಕುಡ್ಲ ಸಂಘಟನೆಯು ಕಳೆದ 8 ವರ್ಷಗಳಲ್ಲಿ ₹10 ಕೋಟಿಗೂ ಅಧಿಕ ಮೌಲ್ಯದ ವೈದ್ಯಕೀಯ, ಶೈಕ್ಷಣಿಕ ಹಾಗೂ ಮನೆ ನಿರ್ಮಾಣ ನೆರವು ಒದಗಿಸಿದೆ. ಕೋವಿಡ್ ಅವಧಿಯಲ್ಲಿ ಉಚಿತ ಆಂಬ್ಯುಲೆನ್ಸ್ ಸೇವೆ ಹಾಗೂ ರೇಷನ್ ಕಿಟ್ ವಿತರಣೆ ಮೂಲಕ ಗಮನ ಸೆಳೆದಿದ್ದು, ದುಬಾಯಿಯಲ್ಲಿಯೂ ಘಟಕ ಸ್ಥಾಪಿಸಿ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಕಾರ್ಯಕ್ರಮದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಾಜಿ ಅಧ್ಯಕ್ಷ ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಬೋಳೂರು ಮೊಗವೀರ ಮಹಾಸಭಾ ಅಧ್ಯಕ್ಷ ಸುಭಾಶ್ ಬೋಳೂರು, ವಸಂತ್ ಪೂಜಾರಿ, ಉದ್ಯಮಿ ಹಾಗೂ ದಾನಿ ದರ್ಶನ್ ಜೈನ್, ರಣ್ ದೀಪ್ ಕಾಂಚನ್, ಬಿರುವೆರ್ ಕುಡ್ಲ ಅಧ್ಯಕ್ಷ ರಾಕೇಶ್ ಬಲ್ಲಾಳ್ ಬಾಗ್, ದುಬಾಯಿ ಘಟಕದ ಅಧ್ಯಕ್ಷ ಸಂದೀಪ್ ಕೋಟ್ಯಾನ್ ಕಾರ್ಕಳ, ಅಶ್ವಿನ್ ರಾಜ್ ಚಿಲಿಂಬಿ, ಲೋಹಿತ್ ಗಟ್ಟಿ, ರಾಮ್ ಎಕ್ಕೂರು, ದಿನಿಲ್ ಬಲ್ಲಾಳ್ ಬಾಗ್, ಗಿರೀಶ್ ಬೋಳೂರು, ಗಣೇಶ್ ಎಕ್ಕೂರು, ರಿತೇಶ್ ಉಳ್ಳಾಲ ಸೇರಿದಂತೆ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ದಾನಿಗಳು ಮತ್ತು ಫಲಾನುಭವಿಗಳ ಕುಟುಂಬದವರು ಉಪಸ್ಥಿತರಿದ್ದರು.

Found this useful? Share it.
Share

Relatedಸಂಬಂಧಿತ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ
Billava News

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್‌ಪಿ)ಯ ಮುಂಬೈ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು...

12m ago
ಉತ್ಸಾಹ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಧನೆಯ ಶಿಖರಕ್ಕೇರಿದ ಯುಥಿಕಾ ಪೂಜಾರಿ
Billava News

ಉತ್ಸಾಹ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಧನೆಯ ಶಿಖರಕ್ಕೇರಿದ ಯುಥಿಕಾ ಪೂಜಾರಿ

ಚಿತ್ರಕಲೆಗೆ ಅಪಾರ ಆಸಕ್ತಿ ಹೊಂದಿರುವ ಸ್ವಯಂ-ಕಲಿತ ಕಲಾವಿದೆ ಯುಥಿಕಾ ಪೂಜಾರಿ ಅವರು ಸಮರ್ಪಣೆ, ಕಠಿಣ ಪರಿಶ್ರಮ...

20m ago
ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ
Billava News

ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ

ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ...

25m ago
ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ರಾಷ್ಟ್ರೀಯ ಸ್ಪರ್ಧೆಯಲ್ಲಿ ಉಡುಪಿಯ ಗ್ಯಾನ್ ಜಿ ಪಾಲನ್‌ಗೆ ಪ್ರಥಮ ರ‍್ಯಾಂಕ್
Billava News

ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ರಾಷ್ಟ್ರೀಯ ಸ್ಪರ್ಧೆಯಲ್ಲಿ ಉಡುಪಿಯ ಗ್ಯಾನ್ ಜಿ ಪಾಲನ್‌ಗೆ ಪ್ರಥಮ ರ‍್ಯಾಂಕ್

ಉಡುಪಿಯ ಪ್ರತಿಭಾವಂತ ವಿದ್ಯಾರ್ಥಿ ಗ್ಯಾನ್ ಜಿ ಪಾಲನ್ ಅವರು “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

35m ago