Skip to content
Billava News

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ

ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ

ಮಂಜೇಶ್ವರ: ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ಘಟಕದ ಸದಸ್ಯರಾದ ಐತಪ್ಪ ಪೂಜಾರಿ ದೇರಂಬಳ ಅವರ ಪುತ್ರಿ ಕುಮಾರಿ ಸುಶ್ಮಿತಾ ಅವರು ಭಾರೀ ಮಳೆಯ ನಡುವೆಯೂ ಕಾಲೇಜಿನಿಂದ ತನ್ನ ತಂಗಿಯನ್ನು ಕರೆತರಲು ತೆರಳಿದ್ದ ವೇಳೆ ಅಪಾಯಕ್ಕೀಡಾದ ಘಟನೆ ನಡೆದಿದೆ.

1001095200.jpg

ಉಪ್ಪಳದ ಜೋಡುಕಲ್ಲು ಪ್ರದೇಶದ ದೇರಂಬಳ ನದಿಗೆ ಅಡಿಕೆ ಮರದಿಂದ ನಿರ್ಮಿಸಲಾಗಿದ್ದ ತಾತ್ಕಾಲಿಕ ಕಾಲುಸಂಕ ದಾಟುತ್ತಿದ್ದ ವೇಳೆ ಸುಶ್ಮಿತಾ ಕಾಲು ಜಾರಿ ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದಿದ್ದರು. ಈ ದೃಶ್ಯವನ್ನು ಕಂಡ ತಂಗಿ ನಿಶ್ಮಿತಾ ಜೋರಾಗಿ ಕೂಗಿಕೊಂಡಾಗ, ಸಮೀಪದಲ್ಲಿದ್ದ ಉದಯ ಕುಮಾರ್ ಶೆಟ್ಟಿ ಅವರು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ನದಿಗೆ ಧುಮುಕಿದರು.

1001095199.jpg

ಸುಮಾರು 200 ಮೀಟರ್ ದೂರದವರೆಗೆ ನೀರಿನಲ್ಲಿ ತೇಲಿ ಹೋಗುತ್ತಿದ್ದ ಸುಶ್ಮಿತಾ ಅವರನ್ನು ಸಾಹಸದಿಂದ ರಕ್ಷಿಸುವಲ್ಲಿ ಉದಯ ಕುಮಾರ್ ಶೆಟ್ಟಿ ಯಶಸ್ವಿಯಾದರು. ಅವರ ಈ ಮಾನವೀಯತೆ ಹಾಗೂ ಸಾಹಸಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಉದಯ ಕುಮಾರ್ ಶೆಟ್ಟಿ ಅವರ ಈ ಶ್ಲಾಘನೀಯ ಕಾರ್ಯವನ್ನು ಗುರುತಿಸಿ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ಘಟಕದ ವತಿಯಿಂದ ಇಂದು ಸುಶ್ಮಿತಾ ಅವರ ನಿವಾಸದಲ್ಲಿ ಗೌರವಧನ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಗೌರವಾಧ್ಯಕ್ಷ ಶೀನಪ್ಪ ಪೂಜಾರಿ ಅಲಾರು, ಪ್ರಧಾನ ಕಾರ್ಯದರ್ಶಿ ಅನಿಲ್ ಪ್ರತಾಪನಗರ ಹಾಗೂ ಸದಸ್ಯರಾದ ಆನಂದ ಬೀರಿಗುಡ್ಡೆ, ಹರಿಣಿ ಪ್ರತಾಪನಗರ, ಜಯಂತಿ ಹಾಗೂ ಇತರರು ಉಪಸ್ಥಿತರಿದ್ದರು.

Found this useful? Share it.
Share

Relatedಸಂಬಂಧಿತ

ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷರಾಗಿ ದೀಪಕ್ ಎಸ್.ಪಿ. 2ನೇ ಬಾರಿಗೆ ಅವಿರೋಧ ಆಯ್ಕೆ
Billava News

ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷರಾಗಿ ದೀಪಕ್ ಎಸ್.ಪಿ. 2ನೇ ಬಾರಿಗೆ ಅವಿರೋಧ ಆಯ್ಕೆ

ದುಬೈ: ಯುಎಇಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆಯ 2026-2028ನೇ ಸಾಲಿನ ಪದಗ್ರಹಣ ಸಮಾರಂಭವು ಜುಲೈ 11, 2026ರಂದು ದುಬೈಯ ಪ್ರತಿಷ್ಠಿತ ಹೋಟೆಲೊಂದರಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

5h ago
ಕೋಟಿ-ಚೆನ್ನಯ್ಯ ಟ್ರೋಫಿ–ಸೀಸನ್ 2: ಸ್ನೇಹ, ಕ್ರೀಡಾಸ್ಫೂರ್ತಿ ಮತ್ತು ಸಂಘಟನಾ ಬಾಂಧವ್ಯದ ಸಂಗಮ, ಯುವವಾಹಿನಿ ಬೆಂಗಳೂರು ಘಟಕ
Billava News

ಕೋಟಿ-ಚೆನ್ನಯ್ಯ ಟ್ರೋಫಿ–ಸೀಸನ್ 2: ಸ್ನೇಹ, ಕ್ರೀಡಾಸ್ಫೂರ್ತಿ ಮತ್ತು ಸಂಘಟನಾ ಬಾಂಧವ್ಯದ ಸಂಗಮ, ಯುವವಾಹಿನಿ ಬೆಂಗಳೂರು ಘಟಕ

ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರಿಗಾಗಿ ಆಯೋಜಿಸಲಾದ "ಕೋಟಿ-ಚೆನ್ನಯ್ಯ ಟ್ರೋಫಿ – ಸೀಸನ್ 2" ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ (ಜು. 19) ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಉತ್ಸಾಹಭರಿತವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.

17h ago
ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ
Billava News

ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ

ಬಜ್ಪೆ: ರಾಷ್ಟ್ರದ ಆರ್ಥಿಕ ರಾಜಧಾನಿ ಮುಂಬೈನ ಹೆಸರಾಂತ ಉದ್ಯಮಿ, ಸಮಾಜ ಸಂಘಟಕ ಹಾಗೂ ಬಜ್ಪೆ ದೊಡ್ಡಿಕಟ್ಟ ಮನೆತನದ ಹೆಮ್ಮೆಯ ಪುತ್ರರಾದ ಶ್ರೀ ಎಲ್.ವಿ. ಅಮೀನ್ ಅವರ ಜೀವನ ಸಾಧನೆಯನ್ನು ಆಧರಿಸಿದ "ಲೋಕ ಸೇವಕ ಎಲ್.ವಿ. ಅಮೀನ್" ಗೌರವ ಗ್ರಂಥವನ್ನು ಮುಂಬೈ ...

2d ago
ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ
Billava News

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ

ಬಿಲ್ಲವವಾಣಿ ವತಿಯಿಂದ ಶ್ರೀ ಸಚಿನ್ ಪೂಜಾರಿ ಹೇರೂರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಅವರ ಮುಂದಿನ ಜೀವನ ಹಾಗೂ ನಾಯಕತ್ವದ ಪಯಣ ಉಜ್ವಲ...

2d ago