ನಾರಾಯಣ ಗುರು ಜಯಂತಿಯನ್ನು ಸರ್ಕಾರಿ ರಜೆಯಾಗಿ ಘೋಷಿಸುವಂತೆ ಯೂತ್ ಬಿಲ್ಲವ ಕಾರ್ಕಳ ಮನವಿ
ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ...

ಕಾರ್ಕಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸಬೇಕೆಂದು ಆಗ್ರಹಿಸಿ, ಯೂತ್ ಬಿಲ್ಲವ (ರಿ) ಕಾರ್ಕಳ ಸಂಘಟನೆಯ ವತಿಯಿಂದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿ ಮುದ್ರಾಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಯೂತ್ ಬಿಲ್ಲವ (ರಿ) ಕಾರ್ಕಳದ ಪದಗ್ರಹಣ ಸಮಾರಂಭದ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಈ ಮನವಿಯನ್ನು ಸಲ್ಲಿಸಿ, ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಜಮುಖಿ ತತ್ವಗಳು ಹಾಗೂ ಅವರ ಅಪಾರ ಕೊಡುಗೆಯನ್ನು ಪರಿಗಣಿಸಿ, ಅವರ ಜಯಂತಿಯನ್ನು ಕರ್ನಾಟಕ ಸರ್ಕಾರ ಅಧಿಕೃತ ಸರ್ಕಾರಿ ರಜೆಯಾಗಿ ಘೋಷಿಸುವಂತೆ ಸರ್ಕಾರದ ಗಮನಕ್ಕೆ ತರುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸಮಾಜದ ಬಹುಕಾಲದ ಬೇಡಿಕೆಯನ್ನು ಸರ್ಕಾರ ಶೀಘ್ರದಲ್ಲೇ ಈಡೇರಿಸಬೇಕೆಂದು ಆಶಯ ವ್ಯಕ್ತಪಡಿಸಿದರು.
Relatedಸಂಬಂಧಿತ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್ಪಿ) ಮುಂಬೈ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ
ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್ಪಿ)ಯ ಮುಂಬೈ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು...
27m ago
ಉತ್ಸಾಹ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಸಾಧನೆಯ ಶಿಖರಕ್ಕೇರಿದ ಯುಥಿಕಾ ಪೂಜಾರಿ
ಚಿತ್ರಕಲೆಗೆ ಅಪಾರ ಆಸಕ್ತಿ ಹೊಂದಿರುವ ಸ್ವಯಂ-ಕಲಿತ ಕಲಾವಿದೆ ಯುಥಿಕಾ ಪೂಜಾರಿ ಅವರು ಸಮರ್ಪಣೆ, ಕಠಿಣ ಪರಿಶ್ರಮ...
35m ago
ಇಸ್ಕಾನ್ ವ್ಯಾಲ್ಯೂ ಎಜುಕೇಶನ್ ರಾಷ್ಟ್ರೀಯ ಸ್ಪರ್ಧೆಯಲ್ಲಿ ಉಡುಪಿಯ ಗ್ಯಾನ್ ಜಿ ಪಾಲನ್ಗೆ ಪ್ರಥಮ ರ್ಯಾಂಕ್
ಉಡುಪಿಯ ಪ್ರತಿಭಾವಂತ ವಿದ್ಯಾರ್ಥಿ ಗ್ಯಾನ್ ಜಿ ಪಾಲನ್ ಅವರು “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ರ್ಯಾಂಕ್ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
50m ago
ಉಪ್ಪಿನಂಗಡಿ ಸರ್ಕಲ್ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ನಾಮಕರಣಕ್ಕೆ ಯುವವಾಹಿನಿ (ರಿ.) ಉಪ್ಪಿನಂಗಡಿ ಮನವಿ
ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ...
1h ago