ಯುವವಾಹಿನಿ ಮಂಗಳೂರು ಘಟಕದಲ್ಲಿ ಧೂಮಪಾನ ನಿಷೇಧ ಹಾಗೂ ತಂಬಾಕು ನಿಯಂತ್ರಣ ಕಾನೂನು ಕುರಿತು ಜಾಗೃತಿ ಕಾರ್ಯಕ್ರಮ
ಯುವವಾಹಿನಿ (ರಿ.) ಮಂಗಳೂರು ಘಟಕದ ಸಾಪ್ತಾಹಿಕ ಸಭೆಯು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಧೂಮಪಾನ

ಮಂಗಳೂರು, ಜುಲೈ 14: ಯುವವಾಹಿನಿ (ರಿ.) ಮಂಗಳೂರು ಘಟಕದ ಸಾಪ್ತಾಹಿಕ ಸಭೆಯು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಧೂಮಪಾನ ನಿಷೇಧ, ತಂಬಾಕಿನ ದುಷ್ಪರಿಣಾಮಗಳು ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಶ್ರೀ ಪುಂಡಲೀಕ ಲಕಾಟಿ ಅವರನ್ನು ಅಧ್ಯಕ್ಷರು ಆತ್ಮೀಯವಾಗಿ ಸ್ವಾಗತಿಸಿದರು.

ಜಾಗೃತಿ ಉಪನ್ಯಾಸದಲ್ಲಿ ಮಾತನಾಡಿದ ಶ್ರೀ ಪುಂಡಲೀಕ ಲಕಾಟಿ, ತಂಬಾಕು ಮತ್ತು ಧೂಮಪಾನದಲ್ಲಿ ಸುಮಾರು 4,000ಕ್ಕೂ ಹೆಚ್ಚು ವಿಷಕಾರಿ ರಾಸಾಯನಿಕಗಳು ಅಡಕವಾಗಿದ್ದು, ನಿಕೋಟಿನ್, ಟಾರ್, ಅಮೋನಿಯಾ ಸೇರಿದಂತೆ ಹಲವು ಹಾನಿಕಾರಕ ಅಂಶಗಳು ಮಾನವನ ದೇಹದ ಪ್ರತಿಯೊಂದು ಅಂಗಕ್ಕೂ ಗಂಭೀರ ಹಾನಿ ಉಂಟುಮಾಡುತ್ತವೆ ಎಂದು ತಿಳಿಸಿದರು. ಧೂಮಪಾನದ ದುಷ್ಪರಿಣಾಮಗಳು ಕೇವಲ ಸೇವಿಸುವ ವ್ಯಕ್ತಿಗಷ್ಟೇ ಸೀಮಿತವಾಗದೇ ಕುಟುಂಬದ ಸದಸ್ಯರು ಹಾಗೂ ಮಕ್ಕಳ ಮೇಲೂ ಪರಿಣಾಮ ಬೀರುತ್ತವೆ ಎಂದು ಅವರು ಎಚ್ಚರಿಸಿದರು.
ಸೆಕೆಂಡ್ ಹ್ಯಾಂಡ್ ಸ್ಮೋಕ್ ಹಾಗೂ ತರ್ಡ್ ಹ್ಯಾಂಡ್ ಸ್ಮೋಕ್ ಕುರಿತು ವಿವರಿಸಿದ ಅವರು, ಮನೆಯೊಳಗಿನ ಧೂಮಪಾನದಿಂದ ಕುಟುಂಬದ ಸದಸ್ಯರು ಹಾಗೂ ಗರ್ಭಿಣಿಯರು ಮತ್ತು ಗರ್ಭದಲ್ಲಿರುವ ಶಿಶುವಿಗೂ ಅಪಾಯ ಉಂಟಾಗಬಹುದು ಎಂದು ಹೇಳಿದರು. ದೇಹದ ಆರೋಗ್ಯಕ್ಕೆ ಹಾನಿಕಾರಕವಾದ ತಂಬಾಕು ಸೇವನೆಯ ಬದಲು ಪೌಷ್ಟಿಕ ಆಹಾರ ಹಾಗೂ ವಿಟಮಿನ್ಯುಕ್ತ ಆಹಾರವನ್ನು ಸೇವಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ–2003 ಹಾಗೂ ಕರ್ನಾಟಕದಲ್ಲಿ ಜಾರಿಯಲ್ಲಿರುವ ತಿದ್ದುಪಡಿ ನಿಯಮಗಳ ಕುರಿತು ಮಾಹಿತಿ ನೀಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ, ತಂಬಾಕು ಉತ್ಪನ್ನಗಳ ಜಾಹೀರಾತು, ಲೂಸ್ ಸಿಗರೇಟ್ ಮಾರಾಟ ಸೇರಿದಂತೆ ವಿವಿಧ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ಕಾನೂನುಗಳ ಬಗ್ಗೆ ವಿವರಿಸಿದರು.
ಅಲ್ಲದೆ, ಧೂಮಪಾನ ಅಥವಾ ತಂಬಾಕು ಸೇವನೆಯ ಚಟದಿಂದ ಮುಕ್ತರಾಗಲು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ರೂಂ ನಂ.16ರಲ್ಲಿ ಉಚಿತ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ಸೌಲಭ್ಯ ಲಭ್ಯವಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆಯುವಂತೆ ಮನವಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಉಪಯುಕ್ತ ಮಾಹಿತಿ ನೀಡಿದ ಶ್ರೀ ಪುಂಡಲೀಕ ಲಕಾಟಿ ಅವರನ್ನು ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಶ್ರೀ ಹರೀಶ್ ಕೆ. ಸುವರ್ಣ, ಕಾರ್ಯದರ್ಶಿ ಉಷಾ ಕೆ., ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಸಂಘಟನಾ ನಿರ್ದೇಶಕಿ ಶ್ರೀಮತಿ ಜಯಂತಿ ಕೋಟ್ಯಾನ್ ವಂದಿಸಿದರು.
Relatedಸಂಬಂಧಿತ

ಯುವವಾಹಿನಿ ಕೊಲ್ಯ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ: ₹1 ಲಕ್ಷ 43 ಸಾವಿರ ವಿದ್ಯಾನಿಧಿ ವಿತರಣೆ
ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ಶ್ರೀ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಿತು.
1d ago
ಬಿಲ್ಲವ ಮಹಿಳಾ ಘಟಕ ಮಲ್ಪೆ : 'ಆಟಿದ ನೆಂಪುಲೆಗ್ ಒಂಜಿ ದಿನ' ಕಾರ್ಯಕ್ರಮ
ಮಲ್ಪೆ, ಜು. 19: ಬಿಲ್ಲವ ಮಹಿಳಾ ಘಟಕ ಮಲ್ಪೆ ವತಿಯಿಂದ ಮಲ್ಪೆಯ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ "ಆಟಿದ ನೆಂಪುಲೆಗ್ ಒಂಜಿ ದಿನ" ಕಾರ್ಯಕ್ರಮ ಭಾನುವಾರ ನಡೆಯಿತು.
1d ago
ನಾರಾಯಣಗುರು ಒಕ್ಕೂಟ ರಚನೆಗೆ ಸಮಾಜದ ರಾಜಕೀಯ ಜನಪ್ರತಿನಿಧಿಗಳ ಮಹತ್ವದ ಸಮಾಲೋಚನಾ ಸಭೆ
ಸಮಾಜದ ಏಕತೆ, ವಿವಿಧ ಸಂಘಟನೆಗಳ ಸಮನ್ವಯ ಹಾಗೂ ಬಲಿಷ್ಠ "ನಾರಾಯಣಗುರು ಒಕ್ಕೂಟ" ರಚಿಸುವ ಉದ್ದೇಶದಿಂದ ಸಮಾಜದ ರಾಜಕೀಯ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾಲೋಚನಾ ಸಭೆ ಗುರುವಾರ ಬೆಳಿಗ್ಗೆ ಬೆಂಗಳೂರಿನ ಫಾರ್ಚೂನ್ ಪಾರ್ಕ್ ಜೆಪಿ ಸೆಲೆಸ್ಟಿಯಲ್ ಹೋಟೆಲ್ನಲ್ಲಿ ನಡೆಯಿತು.
1d ago
ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ
ಪ್ರಾಣ ಪಣಕ್ಕಿಟ್ಟು ಯುವತಿಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳಗೆ ಬಿರುವೆರ್ ಕುಡ್ಲ ಮಂಜೇಶ್ವರ ಸನ್ಮಾನ
2d ago